ಚಿತ್ರ : ಇಂತಿ ನಿನ್ನ ಪ್ರೀತಿಯ
ಸಂಗೀತ: ಸಾಧು ಕೋಕಿಲ ;
ಗಾಯನ: ವಾಣಿ / ಚಿನ್ಮಯೀ
ಸಾಹಿತಿ : ಜಯಂತ್ ಕಾಯ್ಕಿಣಿ*******
ಮಧುವನ ಕರೆದರೆ
ತನು ಮನ ಸೆಳೆದರೆ
ಶರಣಾಗು ನೀನು ಆದರೇ ... ೨
ಬಿರುಗಾಳಿಯಲ್ಲಿ ತೇಲಿ
ಹೊಸ ಘಳಿಗೆ ಬಂದಿದೆ
ಕನಸೊಂದು ಮೈಯ್ಯಾ ಮುರಿದು
ಬಾ ಬಳಿಗೆ ಎಂದಿದೇ
ಶರಣಾ..ಆಗು ಆದರೆ
ಸೆರೆ ಆಗು ಆದರೆ
ಹೊಸ ಘಳಿಗೆ ಬಂದಿದೆ
ಕನಸೊಂದು ಮೈಯ್ಯಾ ಮುರಿದು
ಬಾ ಬಳಿಗೆ ಎಂದಿದೇ
ಶರಣಾ..ಆಗು ಆದರೆ
ಸೆರೆ ಆಗು ಆದರೆ
ಮಧುವನ ...
ಕಂಗಳಲಿ ಕನಸಿನ ಕುಲುಮೆ
ಹೊಳೆಯುತಿದೆ ಜೀವದ ಒಲುಮೆ
ಬೆಳಕಲ್ಲಿ ನೋಡು ಆದರೆ..ಏ
ಮೈಯೆಲ್ಲಾ ಚಂದ್ರನ ಗುರುತು
ಹೆಸರೆಲ್ಲೊ ಹೋಗಿದೆ ಮರೆತು
ನಾನ್ಯಾರು ಹೇಳು ಆದರೇ
ಹೊಳೆಯುತಿದೆ ಜೀವದ ಒಲುಮೆ
ಬೆಳಕಲ್ಲಿ ನೋಡು ಆದರೆ..ಏ
ಮೈಯೆಲ್ಲಾ ಚಂದ್ರನ ಗುರುತು
ಹೆಸರೆಲ್ಲೊ ಹೋಗಿದೆ ಮರೆತು
ನಾನ್ಯಾರು ಹೇಳು ಆದರೇ
ಮಧುವನ ...
ಮನಸಿನ ಹಸಿ ಬಣ್ಣಗಳಲ್ಲಿ
ನೀನೆಳೆವಾ ರೇಖೆಗಳಲ್ಲಿ
ನಾ ಮೂಡಬೇಕು ಆದರೇ..ಏ
ಎದುರಿದ್ದು ಕರೆಯುವೇ ಏಕೆ
ಜೊತೆಯಿದ್ದು ಮರೆಯುವೇ ಏಕೆ
ನಿನ್ನೊಲವು ನಿಜವೇ ಆದರೇ
ನೀನೆಳೆವಾ ರೇಖೆಗಳಲ್ಲಿ
ನಾ ಮೂಡಬೇಕು ಆದರೇ..ಏ
ಎದುರಿದ್ದು ಕರೆಯುವೇ ಏಕೆ
ಜೊತೆಯಿದ್ದು ಮರೆಯುವೇ ಏಕೆ
ನಿನ್ನೊಲವು ನಿಜವೇ ಆದರೇ
ಮಧುವನ ಕರೆದರೆ
ತನು ಮನ ಸೆಳೆದರೆ
ಶರಣಾಗು ನೀನು ಆದರೆ
ತನು ಮನ ಸೆಳೆದರೆ
ಶರಣಾಗು ನೀನು ಆದರೆ
ಬಿರುಗಾಳಿಯಲ್ಲಿ ತೇಲಿ
ಹೊಸ ಘಳಿಗೆ ಬಂದಿದೆ
ಕನಸೊಂದು ಮೈಯ್ಯಾ ಮುರಿದು
ಬಾ ಬಳಿಗೆ ಎಂದಿದೇ
ಶರಣಾ..ಆಗು ಆದರೆ
ಸೆರೆ ಆಗು ಆದರೆ..
ಹೊಸ ಘಳಿಗೆ ಬಂದಿದೆ
ಕನಸೊಂದು ಮೈಯ್ಯಾ ಮುರಿದು
ಬಾ ಬಳಿಗೆ ಎಂದಿದೇ
ಶರಣಾ..ಆಗು ಆದರೆ
ಸೆರೆ ಆಗು ಆದರೆ..
No comments:
Post a Comment