Tuesday, December 28, 2010

ಈ ಸಂಜೆ ಯಾಕಾಗಿದೆ ನೀನಿಲ್ಲದೇ..

ಚಿತ್ರ : ಗೆಳೆಯ 
ಸಾಹಿತ್ಯ : ಜಯಂತ್ ಕಾಯ್ಕಿಣಿ 
ಸಂಗೀತ : ಮನೋ ಮೂರ್ತಿ
********
 ಈ ಸಂಜೆ ಯಾಕಾಗಿದೆ ನೀನಿಲ್ಲದೇಈ ಸಂಜೆ ಯಾಕಾಗಿದೆ
ಈ ಸಂತೆ ಸಾಕಾಗಿದೆ ನೀನಿಲ್ಲದೇ
ಈ ಸಂತೆ ಸಾಕಾಗಿದೆ
ಏಕಾಂತವೇ ಆಲಾಪವು
ಏಕಾಂಗಿಯ ಸಲ್ಲಾಪವು
ಈ ಮೌನ ಬಿಸಿಯಾಗಿದೆ
ಈ ನೋವಿಗೆ ಕಿಡಿ ಸೋಕಿಸಿ
ಮಜ ನೋಡಿವೆ ತಾರಾಗಣ
ತಂಗಾಳಿಯ ಪಿಸುಮಾತಿಗೆ
ಯುಗವಾಗಿದೆ ನನ್ನ ಕ್ಷಣ
ನೆನಪೆಲ್ಲವೂ ಹೂವಾಗಿದೆ
ಮೈಯಲ್ಲವೂ ಮುಳ್ಳಾಗಿದೆ
ಈ ಜೀವ ಕಸಿಯಾಗಿದೆ
ನೀನಿಲ್ಲದೆ ಆ ಚಂದಿರ
ಈ ಕಣ್ಣಲಿ ಕಸವಾಗಿದೆ
ಅದನೂದುವ ಉಸಿರಿಲ್ಲದೆ
ಬೆಳದಿಂಗಳು ಅಸುನೀಗಿದೆ
ಆಕಾಶದಿ ಕಲೆಯಾಗಿದೆ
ಈ ಸಂಜೆಯ ಕೊಲೆಯಾಗಿದೆ
ಈ ಗಾಯ ಹಸಿಯಾಗಿದೆ..

No comments:

Post a Comment