Tuesday, December 28, 2010

ಎಲ್ಲೋ ಮಳೆಯಾಗಿದೆಯೆಂದು ತಂಗಾಳಿಯು ಹೇಳುತಿದೆ.......


ಚಿತ್ರ: ಮನಸಾರೆ..
ಸಾಹಿತ್ಯ: ಜಯಂತ ಕಾಯ್ಕಿಣಿ
ಸಂಗೀತ: ಮನೋ ಮೂರ್ತಿ
ಹಾಡಿದವರು: ಸೋನು ನಿಗಮ್
*****
ಎಲ್ಲೋ ಮಳೆಯಾಗಿದೆಯೆಂದು ತಂಗಾಳಿಯು ಹೇಳುತಿದೆ...
ಇಲ್ಲೇ ಒಲವಾಗಿದೆಯೆಂದು ಕನಸೊಂದು ಬೀಳುತಿದೆ...
ವ್ಯಾಮೋಹವ ಕೇವಲ ಮಾತಿನಲಿ... ಹೇಳಲು ಬರಬಹುದೇ?
ನಿನ್ನ ನೋಡಿದ ಮೇಲೆಯೂ ಪ್ರೀತಿಯಲೀ... ಬೀಳದೆ ಇರಬಹುದೆ?
ಎಲ್ಲೋ ಮಳೆಯಾಗಿದೆಯೆಂದು ತಂಗಾಳಿಯು ಹೇಳುತಿದೆ...
ಕಣ್ಣಲಿ ಮೂಡಿದೆ ಹನಿಗವನ... ಕಾಯಿಸಿ ನೀ ಕಾಡಿದರೆ...
ನೂತನ ಭಾವದ ಆಗಮನ... ನೀ ಬಿಡದೇ... ನೋಡಿದರೇ...
ನಿನ್ನ ಧ್ಯಾನದಿ ನಿನ್ನದೆ ತೋಳಿನಲಿ ಹೀಗೆಯೇ ಇರಬಹುದೇ?
ಈ ಧ್ಯಾನವ ಕಂಡರೆ ದೇವರಿಗೂ ಕೋಪವು  ಬರಬಹುದೇ?
ಎಲ್ಲೋ ಮಳೆಯಾಗಿದೆಯೆಂದು ತಂಗಾಳಿಯು ಹೇಳುತಿದೆ...
ಇಲ್ಲೇ ಒಲವಾಗಿದೆಯೆಂದು ಕನಸೊಂದು ಬೀಳುತಿದೆ...
ನೆನಪಿನ ಹೂಗಳ ಬೀಸಣಿಕೆ ನೀ ಬರುವ ದಾರಿಯಲಿ...
ಓಡಿದೆ ದೂರಕೆ ಬೀಸಲಿಕೆ ನೀನಿರುವ ಊರಿನಲಿ...
ಅನುಮಾನವೇ ಇಲ್ಲದೆ ಕನಸಿನಲಿ ಮೆಲ್ಲಗೆ ಬರಬಹುದೇ?
ಅಲೆಮಾರಿಯ ಹೃದಯದ ಡೇರೆಯಲಿ ನೀನು ಇರಬಹುದೇ?
ಎಲ್ಲೋ ಮಳೆಯಾಗಿದೆಯೆಂದು ತಂಗಾಳಿಯು ಹೇಳುತಿದೆ...
ಇಲ್ಲೇ ಒಲವಾಗಿದೆಯೆಂದು ಕನಸೊಂದು ಬೀಳುತಿದೆ...
ವ್ಯಾಮೋಹವ ಕೇವಲ ಮಾತಿನಲಿ... ಹೇಳಲು ಬರಬಹುದೇ?
ನಿನ್ನ ನೋಡಿದ ಮೇಲೆಯೂ ಪ್ರೀತಿಯಲೀ... ಬೀಳದೆ ಇರಬಹುದೆ?
ಎಲ್ಲೋ ಮಳೆಯಾಗಿದೆಯೆಂದು ತಂಗಾಳಿಯು ಹೇಳುತಿದೆ...

No comments:

Post a Comment